×
Ad

ರಾಯಚೂರು | ರೈಲ್ವೆ ನಿಲ್ದಾಣದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ : 250 ಲೀಟರ್ ಕಲಬೆರಕೆ ಸೇಂದಿ ವಶ

Update: 2025-01-19 16:22 IST

ರಾಯಚೂರು : ತೆಲಂಗಾಣದಿಂದ ರಾಯಚೂರಿಗೆ ಅಕ್ರಮವಾಗಿ ಕಲಬೆರಕೆ ಸೇಂದಿ ಸಾಗಾಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ರಾಯಚೂರು ರೈಲ್ವೆ ಸ್ಟೇಷನ್ ನಲ್ಲಿ ದಾಳಿ ಮಾಡಿ ಸುಮಾರು 250 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ.

ಆರ್ಪಿಎಫ್ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, ಬಾಟಲ್ ಗಳಲ್ಲಿ ತುಂಬಿದ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಲೋರಲ್ ಹೈಡೇಡ್ ವಿಷಪೂರಿತ ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಸೇಂದಿಯನ್ನು ಮಾರಾಟಕ್ಕೆ ತಯಾರಿಸಿ ತೆಲಂಗಾಣ ರಾಜ್ಯದ ಕೃಷ್ಣ ಗ್ರಾಮದ ರೈಲ್ವೆ ನಿಲ್ದಾಣ ಮೂಲಕ ಆಗಮಿಸಿ ರಾಯಚೂರು ನಗರದ ವಿವಿಧ ಬಡಾವಣೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಈ ವೇಳೆ ಅಬಕಾರಿ ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು, ಉಪ ನಿರೀಕ್ಷಕರು, ರಾಯಚೂರು ವಿಭಾಗ ಹಾಗೂ ವಲಯ ವಿಭಾಗದ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News