×
Ad

ರಾಯಚೂರು: ಬೀದಿನಾಯಿ ದಾಳಿ; ಬಾಲಕ‌ನಿಗೆ ಗಂಭೀರ ಗಾಯ

Update: 2024-11-14 12:22 IST

ರಾಯಚೂರು: ಬೀದಿ ನಾಯಿ ದಾಳಿಗೆ ಬಾಲಕ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡ ಬಾಲಕನನ್ನು ದೇವಸುಗೂರು ಗ್ರಾಮದ ನಿವಾಸಿ ರಾಮು  ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಬಾಲಕನು ಮನೆಗೆ ಹೋಗುತ್ತಿದ್ದ ವೇಳೆ ಏಕಾಏಕಿ ಹುಚ್ಚು ನಾಯಿ ದಾಳಿ ಮಾಡಿದೆ ಎನ್ನಲಾಗಿದೆ.

ಸ್ಥಳದಲ್ಲಿದ ಸಾರ್ವಜನಿಕರು ನೋಡಿ ನಾಯಿಯನ್ನು ಓಡಿಸಿ ,ಬಾಲಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಳೆದ ಒಂದು ವಾರದಲ್ಲಿ ರಾಯಚೂರು ನಗರದಲ್ಲಿ ಬೀದಿ ನಾಯಿಗಳು ಕಡಿತದಿಂದ ಮೂವರಿಗೆ ಗಂಭೀರ ಗಾಯಗೊಂಡು ಘಟನೆ ಕೂಡ ನಡೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News