ರಾಯಚೂರು | ಸರಕಾರಿ ಬಸ್ - ಲಾರಿ ಮುಖಾಮುಖಿ ಢಿಕ್ಕಿ; 16 ಜನರಿಗೆ ಗಾಯ
Update: 2025-05-23 22:36 IST
ರಾಯಚೂರು: ಸಿಂಧನೂರು ನಗರದ ಪಿಡಬ್ಲ್ಯೂ ಕ್ಯಾಂಪ್ ನ ಆಕ್ಸ್ಫರ್ಡ್ ಕಾಲೇಜು ಬಳಿ ಸಾರಿಗೆ ಬಸ್ ಮತ್ತು ಅಕ್ಕಿ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ನಲ್ಲಿದ್ದ 16 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಮತ್ತು ಲಾರಿ ಎರಡೂ ವೇಗವಾಗಿ ಚಲಿಸುತ್ತಿದ್ದವು. ಈ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಲ್ಲಿದ್ದ 16 ಪ್ರಯಾಣಿಕರಿಗೆ ಗಾಯಗಳಾಗಿದೆ.
8 ಜನ ಗಾಯಾಳುಗಳನ್ನು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರನ್ನು ಶಾಂತಿ ಆಸ್ಪತ್ರೆ ಹಾಗೂ ರೇಣುಕಾ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ ತಿಳಿಸಿದ್ದಾರೆ. ಅಪಘಾತದಿಂದ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.