×
Ad

ಬಿಡದಿ | ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ

Update: 2024-08-05 12:13 IST

 ತಿಮ್ಮೇಗೌಡ

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್​ ತಿಮ್ಮೇಗೌಡ ಎಂಬವರು ರಾಮನಗರ ಜಿಲ್ಲೆಯ ಬಿಡದಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇನ್ ಸ್ಪೆಕ್ಟರ್ ತಿಮ್ಮೇಗೌಡ ಅವರು ಒಂದು ತಿಂಗಳ ಹಿಂದೆಷ್ಟೇ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಘಟನಾ ಸ್ಥಳಕ್ಕೆ ರಾಮನಗರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಸದ್ಯ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News