ಹಾರೋಹಳ್ಳಿ| ದಂಪತಿ ಜಗಳ: ಮೂರು ವರ್ಷದ ಮಗು ಮೃತ್ಯು

Update: 2024-01-25 16:21 GMT

ಸಾಂದರ್ಭಿಕ ಚಿತ್ರ (Photo credit: indiatoday.in)

ಬೆಂಗಳೂರು: ದಂಪತಿ ಜಗಳದಲ್ಲಿ ಮಗು ಮೃತಪಟ್ಟಿರುವ ಘಟನೆ ಹಾರೋಹಳ್ಳಿ ತಾಲೂಕಿನ ಗೋದೂರು ಗ್ರಾಮದಲ್ಲಿ ಜರುಗಿದೆ.

ಪತಿ ಪತ್ನಿಯ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ವಿಷ ಕುಡಿದ ಪತ್ನಿ ತನ್ನ ಮಗುವಿಗೂ ವಿಷ ನೀಡಿದ್ದು ಅದನ್ನು ಕುಡಿದ 3 ವರ್ಷದ ಮಗು ದೀಕ್ಷಿತ್ ಗೌಡ ಮೃತಪಟ್ಟಿದೆ ಎನ್ನಲಾಗಿದೆ.

ಹಾರೋಹಳ್ಳಿ ಹೋಬಳಿಯ ಗೋದೂರು ಗ್ರಾಮದ ಸೋಮಕುಮಾರ್ ಮತ್ತು ಪೂರ್ಣಿಮಾ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯತ್ತಿದ್ದು, ಬುಧವಾರ ಇಬ್ಬರ ನಡುವೆ ಮತ್ತೆ ಜಗಳ ಶುರುವಾಗಿ ಇದು ವಿಕೋಪಕ್ಕೆ ತಿರುಗಿದ ಪರಿಣಾಮ ಪೂರ್ಣಿಮಾ ವಿಷ ಕುಡಿದು ತನ್ನ ಮಗು ದೀಕ್ಷಿತ್ ಗೌಡನಿಗೂ ಕುಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆನಂತರ, ಅಸ್ವಸ್ಥಗೊಂಡ ಮಗುವನ್ನು ಗಮನಿಸಿದ ಮನೆಯವರು ತಕ್ಷಣ ಇವರಿಬ್ಬರನ್ನು ಹಾರೋಹಳ್ಳಿ ಬಳಿಯ ದಯಾನಂದ್ ಸಾಗರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಮಗು ದೀಕ್ಷಿತ್ ಗೌಡ ಚಿಕಿತ್ಸೆ ಫಲಿಸದ ಪರಿಣಾಮ ಮೃತಪಟ್ಟಿದ್ದು, ಪೂರ್ಣಿಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದ್ದು, ಹಾರೋಹಳ್ಳಿ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ದಂಪತಿ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News