×
Ad

ಶಿವಮೊಗ್ಗ: ಕಾಡಾನೆ ದಾಳಿಗೆ ರೈತ ಬಲಿ

Update: 2024-08-24 21:17 IST

   ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಆನೆ ದಾಳಿಗೆ ರೈತನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಆಲದೇವರ ಹಸೂರು ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ ಮೃತ ರೈತ ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ವೇಳೆ ತೋಟಕ್ಕೆ ತೆರಳುತ್ತಿದ್ದಾಗ ಆನೆ ದಿಢೀರ್ ದಾಳಿ ನಡೆಸಿದೆ. ಪರಿಣಾಮ ಹನುಮಂತಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News