×
Ad

ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ಸ್ವಾಗತಿಸಿದ ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ ರಾವ್‌ ತಾಯಿ

Update: 2025-05-07 11:29 IST

ಪತ್ನಿ, ಮಗನೊಂದಿಗೆ ಮಂಜುನಾಥ್‌ ರಾವ್‌ PC: newindianexpress.com

ಶಿವಮೊಗ್ಗ: ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆದ ದಾಳಿಯನ್ನು ಪಹಲ್ಗಾಮ್‌ ದಾಳಿಯಲ್ಲಿ ಮೃತರಾದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರ ತಾಯಿ ಸುಮತಿ ಸ್ವಾಗತಿಸಿದ್ದಾರೆ.

ಮಂಜುನಾಥ ರಾವ್‌ ಅವರ ತಾಯಿ ಸುಮತಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಹೊರ ದೇಶಕ್ಕೆಲ್ಲ ಆರಾಮವಾಗಿ ಹೋಗಿ ಬರುತ್ತಾರೆ. ಆದರೆ ನಮ್ಮದೇ ದೇಶದಲ್ಲಿ ನಾವು ಓಡಾಡಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಅನಿಸುತ್ತಿತ್ತು. ಕೇಂದ್ರ ಸರ್ಕಾರ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿದೆ ಎಂದರು.

ಕುಟುಂಬದಲ್ಲಿ ಯಜಮಾನ ಯಾವುದೇ ತೀರ್ಮಾನ ಕೈಗೊಂಡರು ನಾವೆಲ್ಲ ಬದ್ಧರಾಗಿರುತ್ತೇವೆ. ಹಾಗೆಯೆ ನಮ್ಮ ದೇಶವನ್ನು ಕುಟುಂಬ ಎಂದು ಪರಿಗಣಿಸಿದರೆ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದಾರೆ. ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ನನ್ನ ಮಗ ಪ್ರಕೃತಿ ಸೌಂದರ್ಯ ನೋಡಿ ಬರಲು ಹೋದ. ಮಲೆನಾಡಿನಲ್ಲಿ ಹುಟ್ಟಿದವನು ಅಲ್ಲಿ ಹೋಗಿ ಅನಾಥವಾಗಿ ಸಾವನ್ನಪ್ಪಿದ್ದ. ಇದು ನನಗೆ ಬಹಳ ನೋವಿದೆ ಎಂದರು.

ಕಳೆದ ರಾತ್ರಿ ಎರಡ್ಮೂರು ಜನ ಎನ್‌ಐಎ ಅಧಿಕಾರಿಗಳು ಬಂದಿದ್ದರು. ಸರ್ಕಾರದ ಕಡೆಯಿಂದ ಎಂದು ತಿಳಿಸಿದ್ದರು. ಮಾಧ್ಯಮದವರು ಏನೆಲ್ಲ ಪ್ರಶ್ನೆ ಕೇಳುತ್ತಾರೋ ಅದೇ ರೀತಿಯ ಪ್ರಶ್ನೆಗಳನ್ನು ಕೇಳಿದರು. ನಾವು ಉತ್ತರ ನೀಡಿದ್ದೇವೆ. ತುಂಬಾ ಹೊತ್ತು ಮನೆಯಲ್ಲಿದ್ದರು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News