×
Ad

ಶಿವಮೊಗ್ಗ | ಸೆ.27ರಂದು ಪದಗ್ರಹಣ ಸಮಾರಂಭ; ಕಾಂಗ್ರೆಸ್ ಮುಖಂಡರಾದ ಗೀತಾ ಶಿವರಾಜ್ ಕುಮಾರ್ ಭಾಗಿ

Update: 2025-09-25 17:39 IST

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಕಟದ ವತಿಯಿಂದ ಸೆ.27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್‌ನಲ್ಲಿ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ಸೆ.27ರಂದು ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್‌ಬಾನು ಹಾಗೂ ಗೀತಾ ಶಿವರಾಜ್ ಕುಮಾರ್ ಮತ್ತು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ದತೆಗಳು ನಡೆದಿವೆ.ಈ ಹಿಂದೆ ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಅನಿತಾ ಕುಮಾರಿ ಅವರು ಪಕ್ಷ ಸಂಘಟನೆಗೆ ಶಕ್ತಿ ತುಂಬಿದ್ದರು.ಈಗ ನೂತನ ಜಿಲ್ಲಾಧ್ಯಕ್ಷರಾಗಿ ಜಿ.ಪಂ ಮಾಜಿ ಸದಸ್ಯೆ ಶ್ವೇತಾ ಬಂಡಿಯವರು ನೇಮಕವಾಗಿದ್ದಾರೆ.ಅವರು ಕೂಡ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಶಕ್ತಿ ತುಂಬಲಿದ್ದಾರೆ ಎಂದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿ ಅವರು ಮಾತನಾಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಇದೆ.ಈ ಅನುಭವ ಬಳಸಿಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ಅಂದು ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ,ವಿಧಾನ ಪರಿಷತ್ ಸದಸ್ಯರು,ಕೆಪಿಸಿಸಿ ಕಾರ್ಯದರ್ಶಿಗಳಾದ ಮಂಜುನಾಥ್ ಭಂಡಾರಿ ಹಾಗೂ ಬಲ್ಕೀಷ್ ಭಾನು,ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ನಾಯಕರುಗಳು ಭಾಗಿಯಾಗಿದ್ದಾರೆ.ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿಕೊಡುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಮುಖಂಡರಾದ ಕಲಗೋಡು ರತ್ನಾಕರ್,ವೇದಾ ವಿಜಯಕುಮಾರ್,ಯಮುನಾರಂಗೇಗೌಡ,ರಾಮಚಂದ್ರ ಬಂಡಿ,ಭಾರತಿ ರಾಮಕೃಷ್ಣ,ಕವಿತಾ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News