×
Ad

ಸಾಗರ | ಸಾಲಬಾಧೆ: ಯುವಕ ಆತ್ಮಹತ್ಯೆ

Update: 2025-08-21 11:26 IST

ಸಾಗರ: ಸಾಲಬಾಧೆ ತಾಳಲಾರದೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ಬುಧವಾರ ನಡೆದಿದೆ.

ಮಂಜುನಾಥ್ (36) ಆತ್ಮಹತ್ಯೆ ಮಾಡಿಕೊಂಡವರು.

ಮಂಜುನಾಥ್ ಶಿಕಾರಿಪುರದ ನಾಗೀಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳ ಬೆಳೆದಿದ್ದು, ವಿಪರೀತ ಮಳೆಯಿಂದಾಗಿ ಬೆಳೆ ನಾಶವಾಗಿದೆ.

ಬೆಳೆ ನಂಬಿ ಬ್ಯಾಂಕಿನಿಂದ ಸೇರಿದಂತೆ ಹಲವೆಡೆ ಆರು ಲಕ್ಷ ರೂ.ಗೂ ಅಧಿಕ ಸಾಲ ಮಾಡಿದ್ದರೆನ್ನಲಾಗಿದೆ. ಮಳೆಗೆ ಬೆಳೆ ನೆಲಕಚ್ಚಿದ್ದರಿಂದ ಸಾಲ ತೀರಿಸುವ ಬಗ್ಗೆ ಚಿಂತೆಗೀಡಾಗಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಈ ಬಗ್ಗೆ ಮೃತರ ಪತ್ನಿ ನೀಡಿರುವ ದೂರಿನಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News