×
Ad

ಶಿಕಾರಿಪುರ | ಆ್ಯಂಬುಲೆನ್ಸ್ ಢಿಕ್ಕಿ: ಮೂವರು ಬೈಕ್ ಸವಾರರು ಮೃತ್ಯು

Update: 2024-06-29 09:41 IST

ಶಿವಮೊಗ್ಗ, ಜೂ.29: ಬೈಕ್ ಮತ್ತು ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಅಪಘಾತದಲ್ಲಿ ಹೊಸ ಜೋಗದ ನಿವಾಸಿಗಳಾದ ಪ್ರಸನ್ನ (25), ಕಾರ್ತಿಕ್ (27) ಮತ್ತು ಅಜಯ್ (25) ಎಂಬವರು ಮೃತಪಟ್ಟಿದ್ದಾರೆ.

ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ 108 ಆ್ಯಂಬುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ.

ಈ ಬಗ್ಗೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News