×
Ad

ಶಿವಮೊಗ್ಗ | ರೈಲಿಗೆ ಸಿಲುಕಿ ಕಾರ್ಮಿಕ ಮೃತ್ಯು

Update: 2024-06-02 18:03 IST

ಸಾಂದರ್ಭಿಕ ಚಿತ್ರ (PTI)

ಶಿವಮೊಗ್ಗ: ರೈಲು‌ ಹರಿದು ಕಾರ್ಮಿಕ‌ನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ಕಾರ್ಮಿಕನನ್ನು ರುದ್ರಪ್ಪ (68) ಎಂದು  ಗುರುತಿಸಲಾಗಿದೆ.  ರೈಲ್ವೆ ಹಳಿ ಬಳಿ ಸೌದೆ ಆರಿಸುತ್ತಿದ್ದ ವೇಳೆ ಮೈಸೂರು ತಾಳಗುಪ್ಪ ರೈಲಿಗೆ ಸಿಲುಕಿ ಈ ಅವಘಡ ನಡೆದಿದೆ ಎನ್ನಲಾಗಿದೆ.

ಮೃತ ರುದ್ರಪ್ಪ, ಸ್ವಲ್ಪ ಕಿವುಡು ಹಾಗೂ ಕಣ್ಣು ಮಂಜಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ರೈಲು ಬಂದ ಶಬ್ದ ಕೇಳಿಸದೇ ದುರ್ಘಟನೆ ಸಂಭವಿಸಿದೆ ಎಂದು ಗೊತ್ತಾಗಿದೆ. ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News