ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ
Update: 2025-07-27 11:48 IST
ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಮೇಲಿನ ತುಂಗಾನಗರದಲ್ಲಿ ನಡೆದಿದೆ.
ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ.
ಶನಿವಾರ ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಾಬು ಅಂಜನಪ್ಪ ಹಾಗೂ ತುಂಗಾನಗರ ಠಾಣೆ ಇನ್ಸ್ ಪೆಕ್ಟರ್ ಕೆ ಗುರುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.