×
Ad

ಏಶ್ಯಕಪ್ ಫೈನಲ್: ಸಿರಾಜ್ ಮಾರಕ ಬೌಲಿಂಗ್ ದಾಳಿ: ಶ್ರೀಲಂಕಾ 50 ರನ್‌ಗೆ ಆಲೌಟ್

Update: 2023-09-17 17:16 IST

Photo: Twitter

ಕೊಲಂಬೊ, ಸೆ.17: ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮಾರಕ ಬೌಲಿಂಗ್(6-21)ದಾಳಿಗೆ ಧೂಳೀಪಟವಾದ ಶ್ರೀಲಂಕಾ ಕ್ರಿಕೆಟ್ ತಂಡ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಕೇವಲ 15.2 ಓವರ್‌ಗಳಲ್ಲಿ 50 ರನ್‌ಗೆ ಆಲೌಟಾಗಿದೆ.

ರವಿವಾರ ಪ್ರೇಮದಾಸ ಸ್ಟೇಡಿಯಮ್‌ನಲ್ಲಿ ಟಾಸ್ ಜಯಿಸಿದ ಶ್ರೀಲಂಕಾದ ನಾಯಕ ದಸುನ್ ಶನಕ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಬ್ಯಾಟಿಂಗ್ ಆರಂಭಕ್ಕೆ ಮೊದಲೇ ಮಳೆ ಬಂದ ಕಾರಣ ಪಂದ್ಯವು ವಿಳಂಬವಾಗಿ ಅರಂಭವಾಯಿತು.

ಸಿರಾಜ್ ಒಂದೇ ಓವರ್‌ನಲ್ಲಿ 4 ವಿಕೆಟ್‌ಗಳನ್ನು ಕಬಳಿಸಿ ಶ್ರೀಲಂಕಾದ ಬ್ಯಾಟಿಂಗ್ ಬೆನ್ನಲುಬು ಮುರಿದರು. ಹಾರ್ದಿಕ್ ಪಾಂಡ್ಯ(3-3) ಮೂರು ವಿಕೆಟ್ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News