×
Ad

ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಹಳಿ ತಪ್ಪಿದ ಪಾಕಿಸ್ತಾನದ ಬ್ಯಾಟಿಂಗ್

Update: 2023-10-14 17:27 IST

Photo : cricketworldcup.com

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 12 ನೇ ಪಂದ್ಯದಲ್ಲಿ ಭಾರತ ತಂಡದ ಸಂಘಟಿತ ಬೌಲಿಂಗ್ ದಾಳಿ ಪಾಕಿಸ್ತಾನ ವನ್ನು 191 ರನ್ ನ ಅಲ್ಪ ಮೊತ್ತಕ್ಕೆ ಭಾರತ ತಂಡ ಕಟ್ಟಿಹಾಕಿತು.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಇತ್ತ ಬ್ಯಾಟಿಂಗ್ ಗೆ ಬಂದ ಪಾಕಿಸ್ತಾನ ಆರಂಭಿಕ ಬ್ಯಾಟರ್ಸ್ 5 ಓವರ್ ಗಳಲ್ಲಿ ಆಕ್ರಮಣ ಕಾರಿ ಬ್ಯಾಟಿಂಗ್ ಪ್ರದರ್ಶಿಸಿ ಭಾರತೀಯ ಬೌಲರ್ ಗಳನ್ನು ಒತ್ತಡಕ್ಕೆ ಸಿಲುಕಿಸುವ ಪ್ರಯತ್ನ ಮಾಡಿದರಾದರೂ 8 ನೇ ಓವರ್ ನಲ್ಲಿ ಪಾಕ್ 41 ಗಳಿಸಿರುವಾಗ, ಸಿರಾಜ್ ಬೌಲಿಂಗ್ ನಲ್ಲಿ ಅಬ್ದುಲ್ಲಾ ಶಫೀಕ್ ರನ್ನು ಎಲ್ ಬಿಡಬ್ಲ್ಯೂ ಮಾಡುವುದರೊಂದಿಗೆ ತಂಡಕ್ಕೆ ಆರಂಭಿಕ ಮುನ್ನಡೆ ತಂದಕೊಟ್ಟರು. ದ್ವಿತೀಯ ಕ್ರಮಾಂಕ ದಲ್ಲಿ ಬ್ಯಾಟಿಂಗ್ ಬಂದಿದ್ದ ಇಮಾಮ್ ಉಲ್ ಹಕ್ 36 ರನ್ ಗಳಿಸಿರುವಾಗ ಹಾರ್ದಿಕ್ ಪಾಂಡ್ಯ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಗೆ ಕ್ಯಾಚ್ ನೀಡಿ ಔಟ್ ಆದರು. ಆರಂಭಿಕ ಬ್ಯಾಟರ್ ಗಳ ವಿಕೆಟ್ ಬೇಗ ಪತನವಾದ ನಂತರ ಜವಾಬ್ದಾರಿಯುತ ಆಟ ಆಡಿದ ನಾಯಕ ಬಾಬರ್ ಅಝಮ್ ಹಾಗೂ ರಿಜ್ವಾನ್ ಉತ್ತಮ ಜೊತೆಯಾಟ ನೀಡಿದರು.

ಆದರೆ ಭಾರತೀಯ ಅನುಭವಿ ಬೌಲಿಂಗ್ ಪಡೆಯ ಮುಂದೆ ಪಾಕ್ ರಕ್ಷಣಾತ್ಮಕ ಆಟ ಫಲ ನೀಡಲಿಲ್ಲ. ನಾಯಕ ಬಾಬರ್ ಅಝಮ್ 7 ಬೌಂಡರಿ ಸಹಿತ 50 ರನ್ ಗಳಿಸಿ ಸಿರಾಜ್ ಗೆ ಕ್ಲೀನ್ ಬೌಲ್ಡ್ ಆದರೆ, ಮುಹಮ್ಮದ್ ರಿಜ್ವಾನ್ 49 ರನ್ ಗೆ ಜಸ್ಪ್ರಿತ್ ಬೂಮ್ರ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಯಾವೊಬ್ಬ ಪಾಕ್ ಬ್ಯಾಟರ್ ಭಾರತದ ಆಕ್ರಮಣಕಾರಿ ಬೌಲಿಂಗ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ. ಕುಲದೀಪ್ ಯಾದವ್ ಒಂದೇ ಓವರ್ ನಲ್ಲಿ ಸೌದ್ ಶಕೀಲ್( 6)ಹಾಗೂ ಇಫ್ತಿಕಾರ್ ಅಹ್ಮದ್( 4) ವಿಕೆಟ್ ಕಬಳಿಸಿ ಪಾಕ್ ಬ್ಯಾಟಿಂಗ್ ಬಲ ಮುರಿದರು. ಶಾದಾಬ್ ಖಾನ್ ಮಹಮ್ಮದ್ ನವಾಝ್ 4, ಹಸನ್ ಅಲಿ 12 ರನ್ ಗಳಿಸಿ ಪೆವಿಲಿಯನ್ ಪರೇಡ್ ಗೆ ಸಾಥ್ ನೀಡಿದರು. ಹಾರಿಸ್ 2 ರನ್ ಗಳಿಸಿ ಎಲ್ ಬಿ ಡಬ್ಲ್ಯೂ ಆದರು. ಶಾಹಿನ್ ಅಫ್ರಿದಿ 2 ರನ್ ಗಳಿಸಿದರು.

ಭಾರತ ತಂಡದ ಪರ ಜಸ್ಪ್ರಿತ್ ಬೂಮ್ರ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News