×
Ad

ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸರಕಾರ

Update: 2025-06-18 20:33 IST

ಐಶ್ವರ್ಯಾ ಗೌಡ

ಬೆಂಗಳೂರು: ಐಶ್ವರ್ಯಾಗೌಡ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರಕಾರ ಆದೇಶಿಸಿದೆ.

ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಹಲವಾರು ಕಡೆ ಕೇಸ್ ದಾಖಲಾಗಿತ್ತು. ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವರ್ಗಾಣೆ ಮಾಡಲಾಗಿದೆ.

ಐಶ್ವರ್ಯಾಗೌಡ ವಿರುದ್ಧ ಬೆಂಗಳೂರಿನ ಚಂದ್ರಾಲೇಔಟ್ ಹಾಗೂ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸೇರಿದಂತೆ ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.

‘ನಾನು ಡಿ.ಕೆ.ಸುರೇಶ್ ಅವರ ಸಹೋದರಿ, ನನಗೆ ರಾಜಕೀಯ ನಾಯಕರ ಪರಿಚಯವಿದೆ’ ಎಂದು ಹೇಳಿಕೊಂಡು ಸಾಲದ ರೂಪದಲ್ಲಿ ಸುಮಾರು 9.82 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪದಡಿ 2024ರಲ್ಲಿ ವಾರಾಹಿ ವರ್ಲ್ಡ್‌ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್. ಐತಾಳ್ ಎಂಬುವರು ನೀಡಿದ್ದ ದೂರಿನನ್ವಯ ಚಂದ್ರಾಲೇಔಟ್ ಠಾಣೆಯಲ್ಲಿ ಐಶ್ವರ್ಯಾಗೌಡ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಲ್ಲದೆ, ಆರ್.ಆರ್. ನಗರ ಸೇರಿದಂತೆ ಮಂಡ್ಯ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ಗೌಡ ವಿರುದ್ಧ ಸಾಲು-ಸಾಲು ಪ್ರಕರಣ ದಾಖಲಾಗಿದ್ದವು. ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಐಶ್ವರ್ಯ ಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂಪ್ರೇರಿತವಾಗಿ ಪಿಎಂಎಲ್‍ಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆಕೆಯನ್ನು ಎಪ್ರಿಲ್ 25ರಂದು ಬಂಧಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News