×
Ad

ಚುನಾವಣಾ ಅಕ್ರಮ ಆರೋಪ: ಶಾಸಕ ರಿಝ್ವಾನ್ ಅರ್ಶದ್ ಗೆ ಹೈಕೋರ್ಟ್ ನಿಂದ ನೋಟಿಸ್

Update: 2023-08-30 20:11 IST

ಬೆಂಗಳೂರು, ಆ.30: ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಸಂಪಂಗಿರಾಮನಗರದ ಬಿ.ಲಕ್ಷ್ಮೀದೇವಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆಯ ಸ್ವರೂಪ ಹೊಂದಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ. ಈ ಮೂಲಕ ರಿಝ್ವಾನ್ ಅರ್ಶದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮ. ಹೀಗಾಗಿ, ರಿಝ್ವಾನ್ ಅರ್ಷದ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಪೀಠಕ್ಕೆ ಕೋರಿದರು.

ಪ್ರತಿವಾದಿ ರಿಝ್ವಾನ್ ಅರ್ಶದ್‍ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News