×
Ad

ಮಾರಕಾಸ್ತ್ರಗಳಿಂದ ದಾಳಿ; ರೌಡಿ ಶೀಟರ್‌ ಹತ್ಯೆ

Update: 2023-10-02 19:45 IST

ವಿನೋದ್ 

ಮಂಡ್ಯ, ಅ.2: ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಾಲ್ವರು ದುಷ್ಕರ್ಮಿಗಳು ರೌಡಿ ಶೀಟರ್ ಒಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ವಿನೋದ್ ಆಲಿಯಾಸ್ ಕುಂಟ ವಿನು (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದುಬಂದಿದ್ದು, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಮಾರುತಿ ಓಮಿನಿ ವಾಹನದಲ್ಲ ಬಂದ ನಾಲ್ವರು ದುಷ್ಕರ್ಮಿಗಳು, ಸ್ಕೂಟರ್‍ಗೆ ಢಿಕ್ಕಿ ಹೊಡೆದು ವಿನೋದನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದರೆನ್ನಲಾಗಿದೆ.

ಶ್ರೀರಂಗಪಟ್ಟಣ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News