×
Ad

ಅಪಹರಣ ಪ್ರಕರಣ : ಭವಾನಿ ರೇವಣ್ಣ ಜಾಮೀನು ಎತ್ತಿ ಹಿಡಿದ ಸುಪ್ರೀಂಕೋರ್ಟ್

Update: 2024-10-18 13:04 IST

 ಭವಾನಿ ರೇವಣ್ಣ

ಹೊಸದಿಲ್ಲಿ:  ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ದೌರ್ಜನ್ಯ ಆರೋಪದೊಂದಿಗೆ ಸಂಬಂಧ ಹೊಂದಿದ್ದ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಕ್ರಮವನ್ನು ಶುಕ್ರವಾರ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಕರ್ನಾಟಕ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ.ಸೂರ್ಯಕಾಂತ್ ಹಾಗೂ ನ್ಯಾ. ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು ವಜಾಗೊಳಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News