×
Ad

ವಿಧಾನ ಪರಿಷತ್ ಚುನಾವಣೆ | ಮತಚಲಾಯಿಸಿದ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿಯ ಉಚ್ಚಾಟಿತ ಶಾಸಕರು

Update: 2026-06-18 12:06 IST

ಎಸ್.ಟಿ. ಸೋಮಶೇಖರ್, ಡಿ.ಕೆ.ಶಿವಕುಮಾರ್, ಶಿವರಾಮ ಹೆಬ್ಬಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತದಾನದ ನಡುವೆ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

ಗುರುವಾರ ವಿಧಾನಸೌಧದ ಮೊದಲ ಮಹಡಿಯಲ್ಲಿ ಮತ ಚಲಾಯಿಸಿದ ಬಳಿಕ, ಇಬ್ಬರು ಶಾಸಕರು ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಮೇಲ್ಮನೆ ಚುನಾವಣೆಯ ಮಹತ್ವದ ಮತದಾನದ ನಡುವೆ ನಡೆದ ಈ ಭೇಟಿ ರಾಜಕೀಯವಾಗಿ ಕುತೂಹಲ ಮೂಡಿಸಿದ್ದು, ಉಚ್ಚಾಟಿತ ಬಿಜೆಪಿ ಶಾಸಕರ ಮುಂದಿನ ರಾಜಕೀಯ ನಡೆ ಕುರಿತು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News