×
Ad

ಬಿಜೆಪಿ ನಾಯಕ, ರೌಡಿಶೀಟರ್ ಮಣಿಕಂಠ ರಾಠೋಡಗೆ 14 ದಿನ ನ್ಯಾಯಾಂಗ ಬಂಧನ

Update: 2023-08-25 22:48 IST

ಕಲಬುರಗಿ: ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸರು ದಾಖಲಿಸಿಕೊಂಡಿದ್ದ ಕಲಂ 153(ಎ), 505(1)(ಬಿ) ಐಪಿಸಿ ಪ್ರಕರಣದಲ್ಲಿ ಬಂಧಿತ ಆರೋಪಿ ಬಿಜೆಪಿ ನಾಯಕ ಮಣಿಕಂಠ ರಾಠೋಡನನ್ನು ಪೊಲೀಸರು ಶುಕ್ರವಾರ  ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅದಕ್ಕೂ ಮುಂಚೆ ಪೊಲೀಸರು ಮಣಿಕಂಠ ರಾಠೋಡನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಆರೋಗ್ಯ ತಪಾಸಣೆ ಮಾಡಿಸಿ, ನ್ಯಾಯಾಧೀಶರ ಮುಂದೇ ಹಾಜರು ಪಡಿಸಿದರು.

ನಂತರ ಸಿಪಿಐ ಪ್ರಕಾಶ ಯಾತನೂರ ಅವರ ನೇತೃತ್ವದಲ್ಲಿ ಜೈಲಿಗೆ ಕರೆದುಕೊಂಡು ಹೋದರು.

ಮಣಿಕಂಠ ರಾಠೋಡ ಅವರನ್ನು ಬಂಧಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ನ್ಯಾಯಾಧೀಶರ ಮನೆಯ ಎದುರುಗಡೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕೂಡಲೇ ಪೊಲೀಸರು ಅವರನ್ನು ಚದುರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News