×
Ad

ಆರೆಸ್ಸೆಸ್‌, ಸಂಘ ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ, ನಿಯಮಗಳು ಅನ್ವಯಿಸುವುದಿಲ್ಲವೇ? : ಬಿ.ಕೆ.ಹರಿಪ್ರಸಾದ್‌

"ಸಂವಿಧಾನವನ್ನು ಪಾಲಿಸದವರಿಂದ ಶಾಂತಿ, ಸೌಹಾರ್ದತೆ, ಸಹಬಾಳ್ವೆ ನಿರೀಕ್ಷಿಸಲು ಸಾಧ್ಯವಿಲ್ಲ"

Update: 2025-10-16 16:31 IST

ಬಿ.ಕೆ.ಹರಿಪ್ರಸಾದ್‌

ಬೆಂಗಳೂರು : ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚರವೇ. ಶಾಲೆ, ಸರಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನು ಬಿಜೆಪಿ ಮರೆತಂತಿದೆ. ಇದು ಬಿಜೆಪಿಯ ಜಾಣ ಕುರುಡಾ? ಇಲ್ಲ ಸರಕಾರದ ಗಮನಕ್ಕೇ ಬಾರದೇ ಇಂತಹ ಆದೇಶಗಳಾಗುವುದು ʼಕೇಶವ ಕೃಪಾʼದಲ್ಲಾ? ಎಂದು ಹಿರಿಯ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಸಂವಿಧಾನವನ್ನು ಒಪ್ಪಿಕೊಂಡವರು ಸರಕಾರದ ನೀತಿ,ನಿಯಮಗಳನ್ನು ಪಾಲಿಸಬೇಕಾದ್ದೂ ಮೊದಲ ಕರ್ತವ್ಯ. ಪ್ರಜೆಗಳು ಮಾತ್ರವಲ್ಲ, ಯಾವ ಸಂಘ ಸಂಸ್ಥೆಗಳು ಕೂಡ ಕಾನೂನುಗಳನ್ನು ಮೀರಿ ವರ್ತನೆ ಮಾಡುವಂತಿಲ್ಲ. ಆರೆಸ್ಸೆಸ್‌ ಹಾಗೂ ಸಂಘ-ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ,ನಿಯಮ,ಕಾನೂನುಗಳು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಎಂದು ಕೇಳಿದ್ದಾರೆ.

ಸಂವಿಧಾನವನ್ನು ಒಪ್ಪದವರು, ಸಂವಿಧಾನವನ್ನು ಪಾಲಿಸದವರಿಂದ ಶಾಂತಿ,ಸೌಹಾರ್ದತೆ, ಸಹಬಾಳ್ವೆ ನಿರೀಕ್ಷಿಸಲು ಸಾಧ್ಯವಿಲ್ಲ. ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸುವ ಉದ್ದೇಶಕ್ಕಾಗಿಯೇ ಆರೆಸ್ಸೆಸ್‌ ಸಂಘಟನೆ ನೊಂದಾವಣಿ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟ. ಈ ಕಾರಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭೂಗತವಾಗಿಯೇ ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇಂತಹ ಸಮಾಜ ಘಾತುಕ ಸಂಘಟನೆಗಳ ಉಪಟಳಕ್ಕೆ ಕಡಿವಾಣ ಹಾಕಲೇಬೇಕು. ಸರಕಾರ ಕೂಡಲೇ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News