ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣ | ಪ್ರಮುಖ ಆರೋಪಿ ಜಗದೀಶ್ನ ಪರಿಚಯವಿಲ್ಲ : ಬೈರತಿ ಬಸವರಾಜ್
Update: 2025-07-20 19:59 IST
ಬೈರತಿ ಬಸವರಾಜ್
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಜಗದೀಶ್ ಪರಿಚಯವಿಲ್ಲ, ಯಾರೆಂದು ಗೊತ್ತಿಲ್ಲ ಎಂದು ಪ್ರಕರಣದ ಐದನೇ ಆರೋಪಿಯಾದ ಬಿಜೆಪಿ ಶಾಸಕ ಬೈರತಿ ಬಸವರಾಜ್ ತಿಳಿಸಿದ್ದಾರೆ.
ರವಿವಾರ ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹತ್ಯೆ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ಪೊಲೀಸರು ವಿಚಾರಣೆಗೆ ಕರೆದಿದ್ದರು. ಅದಕ್ಕೆ ಸಹಕರಿಸಿದ್ದೇನೆ. ಜುಲೈ 23ರಂದು ಮತ್ತೆ ವಿಚಾರಣೆಗೆ ಕರೆದಿದ್ದು ಅಂದು ಹಾಜರಾಗುತ್ತೇನೆ ಎಂದರು.
ಹಿನ್ನೆಲೆ: ರೌಡಿಶೀಟರ್ ಶಿವಪ್ರಕಾಶ್ ಯಾನೆ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹಾಗೂ ಇತರ ಐವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.