×
Ad

ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

Update: 2024-09-19 17:43 IST

ಮುನಿರತ್ನ

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ​ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಎಚ್ ಕೋರ್ಟ್‌ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಜಾಮೀನು ನೀಡಿ ಆದೇಶಿಸಿದ್ದಾರೆ.

ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಮುನಿರತ್ನ ಅವರು ಜಾಮೀನು ಕೋರಿ ನ್ಯಾಯಾಲಯದ​ ಮೆಟ್ಟಿಲೇರಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಲಯ ಜಾಮೀನು ಆದೇಶ ಕಾಯ್ದಿರಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News