×
Ad

ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

Update: 2023-08-13 16:08 IST

ಬೆಂಗಳೂರು, ಆ.13: ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿರುವ ದೂರಿನಂತೆ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುತ್ತಾ, ‘ಊರು ಎಂದ ಮೇಲೆ ಹೊಲಗೇರಿ ಇರುತ್ತದೆ’ ಎಂಬ ಹೇಳಿಕೆ ನೀಡಿದ್ದರು. ಇದು ದಲಿತ ಸಮಾಜದ ಜಾತಿ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ. ಆದ್ದರಿಂದ ಉಪೇಂದ್ರ ವಿರುದ್ಧ ದೌರ್ಜನ್ಯ ಕಾಯ್ದೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಮಧುಸೂದನ್ ದೂರಿನಲ್ಲಿ ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News