×
Ad

ಕಾವೇರಿ ವಿಚಾರ | ನಾಳೆ (ಆ.31) ದೆಹಲಿಗೆ ತೆರಳಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

Update: 2023-08-30 19:19 IST

ಬೆಂಗಳೂರು, ಆ.30: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ(ಆ.31) ಹೊಸದಿಲ್ಲಿಗೆ ತೆರಳಿ, ನ್ಯಾಯವಾದಿಗಳೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 3 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ಆದರೆ, 5 ಸಾವಿರ ಕ್ಯೂಸೆಕ್ಸ್ ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಹೇಳಿದೆ. ಗುರುವಾರ ವಾಸ್ತವಾಂಶ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಲಿ. ಆದರೆ, ಲೆಕ್ಕಾಚಾರದ ಬೀಗ ನಮ್ಮ ಬಳಿ ಇದೆ. ನಮ್ಮ ರೈತರನ್ನು ಕಷ್ಟಕಾಲದಲ್ಲೂ ರಕ್ಷಣೆ ಮಾಡಬೇಕು. ನಾವು ಮೊನ್ನೆ ನಮ್ಮ ರೈತರಿಗೆ ನೀರು ಬಿಟ್ಟಿದ್ದೆವು. ಬೊಮ್ಮಾಯಿ ಅವರು ರಾಜಕಾರಣ ಮಾಡುತ್ತಿದ್ದು, ಮುಂದುವರೆಸಲಿ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News