×
Ad

ಚಿಕ್ಕಮಗಳೂರು: ಚಿರತೆ ದಾಳಿಗೆ 31 ಕುರಿಗಳು ಸಾವು

Update: 2023-12-16 10:39 IST

ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ನಡೆದಿದೆ.

ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು, ಲಕ್ಷ್ಮಣ್ ಎಂಬವರಿಗೆ ಸೇರಿದ ಕುರಿಗಳನ್ನು ಸುಶೀಲಮ್ಮ ಎಂಬವರ ತೋಟದ ಮನೆಯಲ್ಲಿ ಕಟ್ಟಿ ಹಾಕಲಾಗಿತ್ತು.

ಕುರಿಗಳ ಸಾವಿನಿಂದಾಗಿ ಸುಮಾರು 4 ಲಕ್ಷ ರೂ. ನಷ್ಟವುಂಟಾಗಿದೆ ಎಂದು ತಿಳಿದು ಬಂದಿದೆ

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಪಶು ವೈದ್ಯ ಉಮೇಶ್ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News