×
Ad

ಚಿಕ್ಕಮಗಳೂರು: ರೌಡಿಶೀಟರ್ ಪೂರ್ಣೇಶ್ ಗೆ ಗುಂಡೇಟು

Update: 2023-10-30 11:57 IST

ಚಿಕ್ಕಮಗಳೂರು: ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹಾಜರಾಗದ ರೌಡಿ ಶೀಟರ್ ಮೇಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ವರದಿಯಾಗಿದೆ.

ಆರೋಪಿಯನ್ನು ಪೂರ್ಣೇಶ್ (31) ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಪೂರ್ಣೇಶ್ ನನ್ನು ಬಂಧಿಸಲು ಖಚಿತ ಮಾಹಿತಿ ಮೇರೆಗೆ ಆತ ಅವಿತುಕೊಂಡಿದ್ದ ಸ್ಥಳಕ್ಕೆ ಪೊಲೀಸರು ಧಾವಿಸಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮಂಜುನಾಥ್ ರಿಗೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದಾಗ ಪೋಲೀಸರ ಪ್ರಾಣ ರಕ್ಷಣೆ ಉದ್ದೇಶದಿಂದ ಆರೋಪಿಯ ಕಾಲಿಗೆ ಪಿ.ಎಸ್.ಐ.‌ದಿಲೀಪ್ ಕುಮಾರ್ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News