ಬಿಜೆಪಿ ನಾಯಕರ "ನನ್ನನ್ನೂ ಬಂಧಿಸಿ" ಅಭಿಯಾನಕ್ಕೆ ಕಾಂಗ್ರೆಸ್ ತಿರುಗೇಟು
Update: 2024-01-05 12:27 IST
Photo: twitter.com/INCKarnataka
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ʼ40,000 ಕೋಟಿಯ ಅಕ್ರಮದಲ್ಲಿ ನಾನೂ ಪಾಲುದಾರ. ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ ಎಂದು ಕಾಂಗ್ರೆಸ್ ಟೀಕಿಸಿದೆ.
ಹುಬ್ಬಳ್ಳಿಯ ಕರಸೇವಕರ ಬಂಧನವನ್ನು ಖಂಡಿಸಿ ಬಿಜೆಪಿ ನಾಯಕರು ʼನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನ ಕೈಗೊಂಡಿರುವ ಬಗ್ಗೆ ಕಾಂಗ್ರೆಸ್, ಸರಣಿ ಟ್ವೀಟ್ ಗಳನ್ನು ಮಾಡಿದೆ.
ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಎಂದು ಪ್ರಶ್ನಿಸಿದೆ.