ಎಚ್.ಡಿ. ದೇವೇಗೌಡ ಯಶಸ್ಸಿನ ಹಿಂದೆ ಚೆನ್ನಮ್ಮ ಇದ್ದರು: ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

Update: 2026-07-18 20:29 IST

ಬೆಂಗಳೂರು: ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ಅದೇ ರೀತಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪ್ರತಿ ಯಶಸ್ಸಿನ ಹಿಂದೆ ನಿಂತಿದ್ದವರು ಚೆನ್ನಮ್ಮ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚೆನ್ನಮ್ಮ ನಿಧನ ಹಿನ್ನೆಲೆ ಶನಿವಾರ ಸಂತಾಪ ಸೂಚಿಸಿ ಮಾತನಾಡಿದ ಅವರು, ಅಪಾರ ಧೈವಭಕ್ತೆಯಾಗಿದ್ದ ಚೆನ್ನಮ್ಮ ಅವರು ತುಂಬು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ ಎಂದು ಹೇಳಿದ್ದಾರೆ.

ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ. ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ದೇವೇಗೌಡರ ಪ್ರತಿ ಯಶಸ್ಸಿನ ಹಿಂದೆ ನಿಂತಿದ್ದವರು. ಅವರ ಕುಟುಂಬ ಸದಸ್ಯರು ಸೋತಾಗ ಕುಗ್ಗಲಿಲ್ಲ, ಗೆದ್ದಾಗ ಹಿಗ್ಗಲಿಲ್ಲ. ರಾಜಕೀಯದ ಏಳು-ಬೀಳುಗಳಲ್ಲಿ ದೇವೇಗೌಡರಿಗೆ ಬೆನ್ನೆಲುಬಾಗಿ ನಿಂತಿದ್ದರು ಎಂದು ತಿಳಿಸಿದ್ದಾರೆ.

ಇಳಿ ವಯಸ್ಸಿನಲ್ಲಿ ಪತ್ನಿಯ ಅಗಲಿಕೆ ದೇವೇಗೌಡರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ನೋವು ತರುವುದರ ಜತೆಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬವರ್ಗ, ಬಂಧುಗಳು ಹಾಗೂ ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News