×
Ad

'ಗೃಹಜ್ಯೋತಿ' ಜು.1ರಿಂದ ಫಲಾನುಭವಿಗಳ ಪರಿಶೀಲನೆ ಆರಂಭ

Update: 2026-06-30 22:30 IST


ಬೆಂಗಳೂರು : ರಾಜ್ಯ ಸರಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ 'ಗೃಹಜ್ಯೋತಿ' ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲ ಎಸ್ಕಾಂಗಳ ಸಿಬ್ಬಂದಿ ಜುಲೈ 1ರಿಂದ ಕೈಗೊಳ್ಳಲಿದ್ದಾರೆ.

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ "ಗೃಹಜ್ಯೋತಿ" ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.

ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ ಎಂದು ಇಂಧನ ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News