×
Ad

ʼಜನಗಣತಿಯೊಂದಿಗೆ ಜಾತಿ ಗಣತಿʼ ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ : ಎಚ್.ಡಿ.ಕುಮಾರಸ್ವಾಮಿ

Update: 2025-04-30 21:53 IST

ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಮುಂಬರುವ ಜನಗಣತಿಯೊಂದಿಗೆ ಜಾತಿಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಬುಧವಾರ ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.

ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಿ ಮೋದಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಜೆಡಿಎಸ್ ಪಕ್ಷವು ಸ್ವಾಗತಿಸುತ್ತದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News