×
Ad

ರೌಡಿಶೀಟರ್ ಹತ್ಯೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ

Update: 2025-07-18 21:18 IST

ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧಿಸದಂತೆ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಅಲ್ಲದೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಹೈಕೋರ್ಟ್​ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ‌. ರೌಡಿಶೀಟರ್​ ಶಿವಪ್ರಕಾಶ್​ ಕೊಲೆ ಪ್ರಕರಣದಲ್ಲಿ ದಾಖಲಾಗಿರುವ ಎಫ್​ಐಆರ್​ ಮತ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ರದ್ದು ಕೋರಿ ಬಿಜೆಪಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್​ ಅವರಿದ್ದ ಪೀಠ ಮೇಲಿನ ಆದೇಶ ನೀಡಿದೆ‌.

ಅರ್ಜಿದಾರರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್​ 35(3)ರ ಅಡಿಯಲ್ಲಿ ನೋಟಿಸ್​ ಜಾರಿ ಮಾಡಲಾಗಿದೆ. ಅದರಂತೆ ವಿಚಾರಣೆ ನಡೆಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News