×
Ad

ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತಯಾಚನೆ ಪ್ರಕರಣ: ಸುಳ್ಯದ ಶಿವಪ್ರಸಾದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

Update: 2024-11-11 20:03 IST

ಬೆಂಗಳೂರು: ವಿವಾಹದ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಯದ ಶಿವಪ್ರಸಾದ್ ವಿರುದ್ದ ಚುನಾವಣಾಧಿಕಾರಿ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ 'ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ' ಎಂದು ಮುದ್ರಣ‌ ಮಾಡಿದ್ದಕ್ಕೆ ಸಂಬಂಧ‌ ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದರು‌. ಈ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಮಾರ್ಚ್ 1 ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಚುನಾವಣಾ ನೀತಿಸಂಹಿತೆ ಮಾರ್ಚ್ 16 ರಂದು ಜಾರಿಯಾಗಿದೆ. ಹೀಗಾಗಿ ಪ್ರಕರಣ ರದ್ದುಪಡಿಸಬೇಕೆಂದು ವಕೀಲ ಎಂ. ವಿನೋದ್ ಕುಮಾರ್ ಮನವಿ‌ ಮಾಡಿದರು.

ನೀತಿ ಸಂಹಿತೆಗಿಂತ ಮೊದಲು ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಹೀಗಾಗಿ ಕೇಸ್ ಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News