×
Ad

ಸಂವಿಧಾನ ಪೀಠಿಕೆ ಓದುವ ವೇಳೆ ಡಾ.ಅಂಬೇಡ್ಕರ್ ಪೋಟೋ ಹಾಕಿಲ್ಲವೆಂಬ ಆರೋಪ: ಮಹಿಳಾ ಅಧಿಕಾರಿಯ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆ

Update: 2025-07-08 23:22 IST

ಕರ್ನಾಟಕ ಹೈಕೋರ್ಟ್‌ (PTI)

ಬೆಂಗಳೂರು: 2024ರ ನವೆಂಬರ್ 26ರಂದು ಸಂವಿಧಾನದ ದಿನದ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಆಯೋಜಿಸಿದ್ದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಪರಿಷತ್ತಿನ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿ ವಿಧಾನಪರಿಷತ್ತಿನ ಕಾರ್ಯದರ್ಶಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿದೆ.

ತಮ್ಮ ಅಮಾನತು ಆದೇಶ ರದ್ದು ಕೋರಿ ಕೆ.ಜೆ. ಜಲಜಾಕ್ಷಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ಮೇಲಿನ ಆದೇಶ ನೀಡಿದೆ.

ಅರ್ಜಿದಾರರ ವಾದ ಆಲಿಸಿ ಪರಿಷತ್ತಿನ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿ ಜುಲೈ 4ರಂದು ವಿಧಾನಪರಿಷತ್ತಿನ ಕಾರ್ಯದರ್ಶಿ ಹೊರಡಿಸಿದ್ದ ಆದೇಶಕ್ಕೆ ಅರ್ಜಿಯ ಮುಂದಿನ ವಿಚಾರಣೆವರೆಗೆ ತಡೆ ನೀಡಿ ಆದೇಶಿಸಿತು.

ಅಲ್ಲದೇ ವಿಧಾನಪರಿಷತ್ತಿನ ಸಭಾಪತಿ ಹಾಗೂ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಿತು. ಅಗತ್ಯ ಬಿದ್ದರೆ ತಡೆ ಆದೇಶವನ್ನು ಬದಲಿಸಲು ಅಥವಾ ಮಾರ್ಪಡಿಸಲು ಪ್ರತಿವಾದಿಗಳು ಕೋರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News