ʼಕರ್ನಾಟಕ ಸುವರ್ಣ ಸಂಭ್ರಮʼಕ್ಕೆ ಸಾರ್ವಜನಿಕರಿಂದ ಲೋಗೊ ರಚನೆಗೆ ಆಹ್ವಾನ; ವಿಜೇತರಿಗೆ ಸಿಗಲಿದೆ ನಗದು ಬಹುಮಾನ

Update: 2023-09-18 11:13 GMT

ಸಂಗ್ರಹ ಚಿತ್ರ

ಬೆಂಗಳೂರು, ಸೆ.18: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಸಾರ್ವಜನಿಕರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ.

‘ಕರ್ನಾಟಕ ಸಂಭ್ರಮ 50’ ಹಸರಾಗಲಿ ಕರ್ನಾಟಕ: ಉಸಿರಾಗಲಿ ಕನ್ನಡ' ಎಂಬ ಶೀರ್ಷಿಕೆಯಡಿ ರಾಜ್ಯಾದಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಸರಕಾರವು ಉದ್ದೇಶಿಸಿದೆ.

ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ(ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರು ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಕಳುಹಿಸಬಹುದು. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25 ಸಾವಿರ ರೂ.ಗಳ ಬಹುಮಾನವನ್ನು ನಿಗದಿಪಡಿಸಲಾಗಿದೆ.

ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ಸೆ.20ರಿಂದ ಸೆ.30ರ ವರೆಗೆ ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಇಲಾಖೆಯ ಜಾಲತಾಣ https://kannadasiri.karnataka.gov.in/ ನಲ್ಲಿ ಪಡೆಯಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News