×
Ad

ಅಪಪ್ರಚಾರ ಮಾಡುವುದರಲ್ಲಿ ಬಿಜೆಪಿ ಎತ್ತಿದ ಕೈ : ಈಶ್ವರ್‌ ಖಂಡ್ರೆ

Update: 2025-01-02 19:33 IST

ಈಶ್ವರ್‌ ಬಿ ಖಂಡ್ರೆ

ಬೆಂಗಳೂರು : ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ್‌ ಅವರಿಗೆ ಐವರು ಸೋದರಿಯರಿದ್ದು, ಒಬ್ಬರಿಗಾದರೂ ಸರಕಾರಿ ನೌಕರಿ ನೀಡುವಂತೆ ಮುಖ್ಯಮಂತ್ರಿಗೆ ತಾವು ಮನವಿ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಪಾಂಚಾಳ್‌ ಸಾವು ಅತ್ಯಂತ ದುಃಖದಾಯಕ, ಅವರು ನನ್ನ ಮತಕ್ಷೇತ್ರದವರಾಗಿದ್ದು, ಈ ದುರ್ಘಟನೆಯ ಬಳಿಕ ತಾವು ಹೋಗಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಸ್ವತಂತ್ರ ತನಿಖೆಯ ಭರವಸೆ ನೀಡಿದ್ದೆ. ಈಗ ಪ್ರಕರಣವನ್ನು ಸರಕಾರ ಸಿಐಡಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸರಕಾರದ ವಿರುದ್ಧ ಮಾತನಾಡಲು ಯಾವುದೇ ವಿಚಾರ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ನಿರತವಾಗಿದೆ. ಪ್ರಿಯಾಂಕ್ ಖರ್ಗೆ ವಿರುದ್ಧವೂ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ʼಬಿಜೆಪಿ ನಾಯಕರ ಮೇಲೆ ಹಲವು ಭ್ರಷ್ಟಾಚಾರ ಆರೋಪ, ಅಕ್ರಮದ ಆರೋಪ ಇದೆ, ಆ ಬಗ್ಗೆ ಯಾರೂ ಮಾತನಾಡಲ್ಲ. ಆದರೆ ಪ್ರಿಯಾಂಕ್ ಖರ್ಗೆ ವಿರುದ್ಧ ಡೆತ್ ನೋಟ್ ನಲ್ಲಿ ಯಾವುದೇ ಆರೋಪ ಇಲ್ಲದಿದ್ದರೂ ರಾಜೀನಾಮೆ ಕೇಳುವುದು ಅಸಮಂಜಸ, ಇದು ರಾಜಕೀಯ ಪ್ರೇರಿತʼ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News