×
Ad

ಫೆಬ್ರವರಿ ಮೊದಲ ವಾರ ‘ಅರ್ಜುನ ಸ್ಮಾರಕ’ ಉದ್ಘಾಟನೆ : ಈಶ್ವರ್ ಖಂಡ್ರೆ

Update: 2025-01-20 18:50 IST

ಈಶ್ವರ್ ಖಂಡ್ರೆ/ಅರ್ಜುನ ಆನೆ

ಬೆಂಗಳೂರು : ಹಾಸನ ಜಿಲ್ಲೆಯ ಯಸಳೂರು ಅರಣ್ಯದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಮುಖಿರಹಿತ ಪ್ರಮಾಣಪತ್ರ ನೀಡಿಕೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಅರ್ಜುನನ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು.

ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿ.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದರು.

ಬಳ್ಳೆಯಲ್ಲೂ ಸ್ಮಾರಕ: ‘ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ ಹಿನ್ನೆಲೆಯಲ್ಲಿ ಬಳ್ಳೆಯಲ್ಲಿ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು’

-ಈಶ್ವರ್ ಖಂಡ್ರೆ, ಅರಣ್ಯ ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News