×
Ad

ಕಲಬುರಗಿ: 'ಭವಿಷ್ಯ' ನುಡಿಯುತ್ತಿದ್ದ ಮಹಿಳೆಯ ಬರ್ಬರ ಹತ್ಯೆ

Update: 2023-11-22 10:36 IST

ಕಲಬುರಗಿ, ನ.22: ದೇವರ ಹೆಸರಲ್ಲಿ 'ಭವಿಷ್ಯ' ನುಡಿಯುತ್ತಿದ್ದ ಮಹಿಳೆಯೊಬ್ಬರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಘವೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂತೋಷ ಕಾಲನಿಯ ನಿವಾಸಿ ರತ್ನಬಾಯಿ (64) ಹತ್ಯೆಯಾದ ಮಹಿಳೆ. ಒಬ್ಬಂಟಿಯಾಗಿ ವಾಸ ಮಾಡುತ್ತಿದ್ದ ರತ್ನಬಾಯಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಆರ್.ಜೆ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News