×
Ad

ಯುವಕರಿಂದ ಹಲ್ಲೆ ಆರೋಪ: ಮನನೊಂದ 10ನೇ ತರಗತಿ‌ ವಿದ್ಯಾರ್ಥಿ ಆತ್ಮಹತ್ಯೆ

Update: 2023-07-04 00:41 IST

ಕಲಬುರಗಿ: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕೊರಿಕೋಟಾ ಗ್ರಾಮದಲ್ಲಿ ನಡೆದಿದೆ.

ಕೆಲ ಯುವಕರು ಸೇರಿ ವಿನಾಃಕಾರಣ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಕುರಿಕೋಟಾ ಗ್ರಾಮದ ಪ್ರಶಾಂತ ಅಷ್ಟಗಿ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ. ಈತ ಅವರಾದ (ಬಿ) ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ.

'ಕುರಿಕೋಟಾ ಗ್ರಾಮದ ಯುವಕ ಹಾಗೂ ಆತನ ಕಲಬುರಗಿಯ ಕೆಲ ಸ್ನೇಹಿತರು ಸೇರಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ಪ್ರಶಾಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿ ಮಹಾಗಾಂವ ಪೊಲೀಸ್‌ ಠಾಣೆಯಲ್ಲಿ ಮೃತ ಬಾಲಕನ ತಂದೆ ದೂರು ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News