×
Ad

ಕಾಪು: ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ ಮಿಲಾದುನ್ನಬಿ ರ‍್ಯಾಲಿಯಲ್ಲಿದ್ದ ಯುವಕರು

Update: 2023-09-28 15:25 IST

ಕಾಪು: ಇಲ್ಲಿಗೆ ಸಮೀಪದ ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಅವರನ್ನು ಅಲ್ಲೇ ಮಿಲಾದುನ್ನಬಿ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರು ಆಸ್ಪತ್ರೆ ಸಾಗಿಸುವಲ್ಲಿ ನೆರವಾದರು.

ಪಡುಬಿದ್ರೆಯ ಮಣಿಕಂಠ ಎಂಬವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಣಿಕಂಠ ಅವರು ಪಡುಬಿದ್ರಿ ಕಡೆಯಿಂದ ಕಾಪು ಕಡೆ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದು ಪರಾರಿಯಾಯಿತು ಎನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡ ಮಣಿಕಂಠ ಅವರನ್ನು ಅಲ್ಲೇ ಸಮೀಪ ಮಿಲಾದುನ್ನಬಿ ರ್ಯಾಲಿಯಲ್ಲಿ ಸಾಗುತ್ತಿದ್ದ ಉಚ್ಚಿಲದ ಯುವಕರು, ಕೂಡಲೇ ಅವರನ್ನು ಮೇಲಕ್ಕೆತ್ತಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದರು. ಬಳಿಕ ಅಪಘಾತಕ್ಕೀಡು ಮಾಡಿದ ಪಿಕಪ್ ವಾಹನವನ್ನು ಬೆನ್ನತ್ತಿ ಕೊಪ್ಪಲ್ ಅಂಗಡಿ ಸಮೀಪ ತಡೆಹಿಡಿದರು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News