Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ.
ರಾಜ್ಯದ ಎಲ್ಲಾ ಸರಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಗೆ 1 ಲಕ್ಷ 25 ಸಾವಿರ ಕೋಟಿ ರೂಪಾಯಿ ರಾಜಸ್ವ ಸಂಗ್ರಹಣೆ ಗುರಿ ನಿಗದಿ
ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು.
ಎರಡು ಕೋಟಿ ರೂ. ವೆಚ್ಚದಲ್ಲಿ ʻಜಾನಪದ ಸಂಗಮʼ ಸಮಾವೇಶದ ಆಯೋಜನೆ
ವಿರಾಜಪೇಟೆಯಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ.
ಅಲ್ಪಸಂಖ್ಯಾತ ಮತ್ತು ಎಸ್ಸಿ-ಎಸ್ಟಿ ನಿಗಮಗಳಿಂದ ಪಡೆದ ಸಾಲದ ಬಡ್ಡಿ ಮನ್ನಾ
ʻಸಾಲುಮರದ ತಿಮ್ಮಕ್ಕʼ ಸ್ಮಾರಕ ನಿರ್ಮಾಣ
ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಘಟಕ ಬಲವರ್ಧನೆಗೆ 10 ಕೋಟಿ ರೂ.
ಕೇಂದ್ರ ಪರಿಸರ ಸಚಿವಾಲಯದಿಂದ ಅರಣ್ಯ ತೀರುವಳಿ ಪಡೆದು ಮೇಕದಾಟು ಯೋಜನೆ ಅನುಷ್ಠಾನ
ರಾಮನಗರದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣ
ಕನ್ನಡದಲ್ಲಿಯೇ ಎಲ್ಲಾ ಕಾನೂನುಗಳ ರಚನೆ ಮತ್ತು ಕೇಂದ್ರದ ಎಲ್ಲಾ ಕಾನೂನುಗಳ ಕನ್ನಡ ಭಾಷಾಂತರ