Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಹಣ ಮೀಸಲಿಟ್ಟ ಸರಕಾರ
*ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿ ಹಣ ಮೀಸಲು
*ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು
*ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10500 ಕೋಟಿ ಮೀಸಲು
*ಶಕ್ತಿ ಯೋಜನೆಗೆ 5300 ಕೋಟಿ ಹಣ ಮೀಸಲು
ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ ಗೇಟುಗಳನ್ನು ಬದಲಾಯಿಸಿ 33 ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು
ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ 12,000 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸುವ ಉಡುತೊರೆಹಳ್ಳ ಯೋಜನೆಗೆ 490 ಕೋಟಿ ರೂ.
6 ತಾಲೂಕುಗಳಿಗೆ ಹೊಸ ಕ್ರೀಡಾಂಗಣ; ಕನಕಪುರ, ಮಸ್ಕಿ, ಗುಳೇದಗಡ್ಡ ತಾಲೂಕುಗಳಲ್ಲಿ 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ
ಬೆಂಗಳೂರು ಅಭಿವೃದ್ಧಿಗೆ 7 ಕೋಟಿ ಅನುದಾನ ಮೀಸಲು
ಕಾಲೇಜು- ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಮರುಚಾಲನೆ
ರಾಜ್ಯದ 5 ಕಡೆ ರೇಷ್ಮೆ ಕೇಂದ್ರ ಸ್ಥಾಪನೆ
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2 ಸಾವಿರ ಹುದ್ದೆ ಭರ್ತಿ
ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಘೋಷಣೆ
ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಘೋಷಣೆ
ಧಾರವಾಡದಲ್ಲಿ 4 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಘೋಷಣೆ
ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ ಯೋಜನೆ