×
Ad

ರಾಜಕೀಯ ದ್ವೇಷಕ್ಕೆ ಪಕ್ಷದ ಕಾರ್ಯಕರ್ತನ ಹತ್ಯೆ: ಕೆಆರ್​ಪಿಪಿ ಶಾಸಕ ಜನಾರ್ದನ ರೆಡ್ಡಿ ಆರೋಪ

Update: 2023-07-20 16:38 IST

ಬೆಂಗಳೂರು: ''ರಾಜಕೀಯ ದ್ವೇಷಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ'' ಎಂದು ಕೆಆರ್​ಪಿಪಿ ಸ್ಥಾಪಕ ಅಧ್ಯಕ್ಷ ಹಾಗು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಗುರುವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮೆಹಬೂಬ್ ಬಾಷಾ ಎಂಬ ನಮ್ಮ ಪಕ್ಷದ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ. ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ ಎನ್ನುವ ಮಾಹಿತಿ ಬಂದಿದೆ. ರಾಜಕೀಯ ದ್ವೇಷದಿಂದ ಈ ಕೊಲೆ ನಡೆದಿದೆ'' ಎಂದು ಆರೋಪಿಸಿದರು. 

''ಮೃತ ಮೆಹೆಬೂಬ್ ಬಾಷಾ ನಮ್ಮ ಪಕ್ಷದ ಗೆಲುವಿಗೆ ಶ್ರಮಿಸಿದ್ದರು. 20 ವರ್ಷಗಳ ನಂತರ ಮತ್ತೆ ಬಳ್ಳಾರಿ ಯಲ್ಲಿ ಈ ರೀತಿ ಕೊಲೆಯಾಗಿದೆ. ಆರೋಪಿಗಳಿಹೆ ಗಲ್ಲು ಶಿಕ್ಷೆಯಾಗಬೇಕು'' ಎಂದು ಒತ್ತಾಯಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News