×
Ad

ಕೊಡಗು: ಕಾರ್ಮಿಕನ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ

Update: 2023-07-26 18:50 IST

ವಿಜಯ್ ಕುಮಾರ್- ಗಾಯಾಳು

ಮಡಿಕೇರಿ ಜು.26 : ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ತೋಟದ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ.

ಕಾರ್ಮಿಕ ವಿಜಯ್  ಕುಮಾರ್ (59) ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ತೂರು ನಲ್ಲೂರು ಗ್ರಾಮದ ತೋಟಕ್ಕೆ ಕೆಲಸಕ್ಕೆಂದು ಬುಧವಾರ ಬೆಳಗ್ಗೆ ತೆರಳುತ್ತಿದ್ದ ಕಾರ್ಮಿಕರ ಗುಂಪಿನ ಮೇಲೆ ಕಾಡಾನೆ ದಾಳಿ ಮಾಡಿದೆ. ಉಳಿದ ಕಾರ್ಮಿಕರು ಓಡಿ ಹೋದರಾದರೂ ದಾಳಿಯಿಂದ ತಪ್ಪಿಸಿಕೊಳ್ಳಲಾಗದ ವಿಜಯಕುಮಾರ್ ಅವರ ಎದೆಯ ಭಾಗಕ್ಕೆ ಘಾಸಿ ಉಂಟಾಯಿತು. ತಕ್ಷಣ ಅವರಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News