×
Ad

ಪ್ರಕೃತಿ ವಿಕೋಪ ನಿರ್ವಹಣೆ: ವಿವಿಧ ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನಿಯೋಜನೆ

ಕರಾವಳಿ ಮತ್ತು ಕೊಡಗು ಜಿಲ್ಲೆಗಳ ಮೇಲುಸ್ತುವಾರಿಯಾಗಿ ಯು.ಟಿ. ಖಾದರ್

Update: 2026-06-25 13:51 IST

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿವಿಧ ಜಿಲ್ಲೆಗಳಿಗೆ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣೆ, ಪರಿಹಾರ ಕಾರ್ಯಾಚರಣೆ ಹಾಗೂ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಚುರುಕುಗೊಳಿಸುವ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಜಂಟಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

ನಿಯೋಜಿತ ಉಪ ಮುಖ್ಯಮಂತ್ರಿ/ಸಚಿವರುಗಳು ಮತ್ತು ಅವರಿಗೆ ವಹಿಸಲಾದ ಜಿಲ್ಲೆಗಳ ಸಂಪೂರ್ಣ ವಿವರ ಇಲ್ಲಿದೆ:

ಡಾ. ಜಿ. ಪರಮೇಶ್ವರ್: ತುಮಕೂರು ಮತ್ತು ಚಿತ್ರದುರ್ಗ

 ಕೆ. ಹೆಚ್. ಮುನಿಯಪ್ಪ: ಬೆಂಗಳೂರು ಗ್ರಾಮಾಂತರ, ಬಳ್ಳಾರಿ ವಿಜಯನಗರ

 ರಾಮಲಿಂಗಾರೆಡ್ಡಿ: ಬೆಂಗಳೂರು ದಕ್ಷಿಣ ಮತ್ತು ಮಂಡ್ಯ

ಎಂ. ಬಿ. ಪಾಟೀಲ್: ವಿಜಯಪುರ ಮತ್ತು ಬಾಗಲಕೋಟೆ

 ಕೆ. ಜೆ. ಜಾರ್ಜ್: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ

 ಕೃಷ್ಣ ಬೈರೇಗೌಡ: ಬೆಂಗಳೂರು ನಗರ ಮತ್ತು ಹಾಸನ

ಈಶ್ವರ್ ಖಂಡ್ರೆ: ಬೀದರ್ ಮತ್ತು ಗದಗ

 ಸತೀಶ್ ಜಾರಕಿಹೊಳಿ: ಬೆಳಗಾವಿ, ಧಾರವಾಡ ಮತ್ತು ಹಾವೇರಿ

 ಪ್ರಿಯಾಂಕ್ ಖರ್ಗೆ: ಕಲಬುರಗಿ ಮತ್ತು ಯಾದಗಿರಿ

ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್: ರಾಯಚೂರು ಮತ್ತು ಕೊಪ್ಪಳ

ಯು. ಟಿ. ಖಾದರ್ ಫರೀದ್: ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ

ಭೈರತಿ ಸುರೇಶ್: ಕೋಲಾರ ಮತ್ತು ಚಿಕ್ಕಬಳ್ಳಾಪುರ

ಡಾ. ಯತೀಂದ್ರ ಸಿದ್ದರಾಮಯ್ಯ: ಮೈಸೂರು ಮತ್ತು ಚಾಮರಾಜನಗರ

ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ನಿಯೋಜಿತ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿಯ ಮೇಲುಸ್ತುವಾರಿ ನಡೆಸಿ, ಪರಿಹಾರ ಕಾರ್ಯ ಹಾಗೂ ತುರ್ತು ಸಭೆಗಳ ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News