×
Ad

ನೇಜಾರು ನಾಲ್ವರ ಕಗ್ಗೊಲೆ ಪ್ರಕರಣ | ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

Update: 2024-06-27 16:16 IST

ಬೆಂಗಳೂರು : ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್  ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರುಣ್ ಚೌಗುಲೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ಪೀಠ ಮೇಲಿನ ಆದೇಶ ನೀಡಿದೆ.

ಉಡುಪಿ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ಐನಾಝ್, ಹಸೀನಾ, ಅಫ್ನಾನ್, ಅಸೀಮ್ ಎಂಬುವವರನ್ನು ಹತ್ಯೆ ನಡೆಸಿದ್ದ ಅರುಣ್ ಚೌಗುಲೆ ಅಧೀನ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿಯ ವಿರುದ್ಧದ ಸಾಂದರ್ಭಿಕ ಸಾಕ್ಷಿಗಳ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳು ಇವೆ. ಅಲ್ಲದೆ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ, ಹೈಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News