×
Ad

ತೆಲಂಗಾಣ ಚುನಾವಣಾ ವೀಕ್ಷಕರಾಗಿ ಸಚಿವ ಬೋಸರಾಜು ನೇಮಕ

Update: 2023-10-21 23:17 IST

ಬೆಂಗಳೂರು, ಅ.21: ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಶೋಕ್ ಶಂಕರ್ ರಾವ್ ಚವಾಣ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರನ್ನು ಕಾಂಗ್ರೆಸ್ ಪಕ್ಷದ ವಿಶೇಷ ವೀಕ್ಷಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆ ನವೆಂಬರ್ 30 ರಂದು ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News