×
Ad

ಚಿಕ್ಕಮಗಳೂರು: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

Update: 2023-10-26 12:14 IST

ಚಿಕ್ಕಮಗಳೂರು: ಮುಂದುವರಿದ ಹುಲಿ ಉಗುರು ಪತ್ತೆ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಬಾಳೆಹೊನ್ನೂರು ಸಮೀಪದ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದು,  ಮೂರು ಹುಲಿ ಉಗುರು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಬಂಧಿತ ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News