×
Ad

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸೋಮವಾರಪೇಟೆಯಲ್ಲಿ ಎನ್‍ಐಎ ತನಿಖೆ

Update: 2023-06-27 19:20 IST

ಮಡಿಕೇರಿ ಜೂ.27 : ದಕ್ಷಿಣ ಕನ್ನಡದ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಎನ್ ಐಎ ಅಧಿಕಾರಿಗಳು ಇಂದು ತನಿಖೆ ನಡೆಸಿದರು ಎಂದು ತಿಳಿದು ಬಂದಿದೆ.

ಸೋಮವಾರಪೇಟೆಯ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಭಾಗದಲ್ಲಿ ಇಬ್ಬರು ವ್ಯಕ್ತಿಗಳ ಮನೆಗೆ ಇಂದು ಬೆಳಗ್ಗೆ ದಾಳಿ ಮಾಡಿದ ಅಧಿಕಾರಿಗಳು ಕೆಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಹೇಳಲಾಗಿದೆ.

ಈ ವ್ಯಕ್ತಿಗಳಿಬ್ಬರು ದುಬೈಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News