×
Ad

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ | ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ : ನಿಖಿಲ್‌ ಕುಮಾರಸ್ವಾಮಿ

Update: 2024-08-17 12:45 IST

PC : x/@Nikhil_Kumar_k

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ" ಎಂದರು.

"ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ" ಎಂದು ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News